ಕಾರು ಡಿಕ್ಕಿ ದ್ವಿಚಕ್ರ ಸವಾರ ಸಾವು


ಕುಣಿಗಲ್ :- ಯಡಿಯೂರು ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ದುರ್ದೈವಿ ವರಾಹಸಂದ್ರ ಗ್ರಾಮದ  ಮುನೇಶ್ (55) ಎಂದು ತಿಳಿದುಬಂದಿದೆ.

ಮೃತಪಟ್ಟವ ತನ್ನ ಗ್ರಾಮ ವರಾಹಸಂದ್ರ ಕಡೆಗೆ ಶನಿವಾರ ಸಂಜೆ  ಯಡಿಯೂರಿನಿಂದ ಹೋಗುವಾಗ ರಾಷ್ಟ್ರೀಯ ಹೆದ್ದಾರಿ- 48 ರಲ್ಲಿ  ಬೆಂಗಳೂರಿನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಅಮೃತೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.